ಕೆ ಎಸ್ ಎಸ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸ್ವಚ್ಛತಾ ಹೈ ಸೇವಾ ಕಾರ್ಯಕ್ರಮ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಸೆ.28ರಂದು ಬೃಹತ್ ಸ್ವಚ್ಛತಾ ಅಭಿಯಾನವನ್ನು ಸ್ವಚ್ಛತಾ ಸೇವಾ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ.ಪಿ.ಟಿ, ಐ ಕ್ಯೂ ಎ ಸಿ ಸಂಯೋಜಕಿ ಲತಾ ಬಿ.ಟಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಆರತಿ ಕೆ ಹಾಗೂ ಸುಮಿತ್ರ ಕುಮಾರಿ.ಎ ಹಾಗೂ ಎರಡು ಘಟಕಗಳ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಹಾಗೂ ತಂಡದವರು ಸಹಕರಿಸಿದರು. ಸುಬ್ರಹ್ಮಣ್ಯ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

Leave a Reply

error: Content is protected !!