ಉದನೆ: ಕೆ ಎಸ್ ಆರ್ ಟಿ ಸಿ ವೋಲ್ವೋ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ಮಧ್ಯೆ ಭೀಕರ ಅಪಘಾತ

ಶೇರ್ ಮಾಡಿ

ನೇಸರ ಫೆ.27: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ಮಂಗಳೂರಿನ ಮಧ್ಯೆ ಉದನೆ ಎಂಬಲ್ಲಿ ಇಂದು ಬೆಳಗ್ಗೆ ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ವೋಲ್ವೋ ಬಸ್ಸು ಹಾಗೂ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರುನ ನಡುವೆ ಅಪಘಾತ ಸಂಭವಿಸಿದೆ.

ಸ್ವಿಫ್ಟ್ ಡಿಸೈರ್ ಕಾರು ಚಲಿಸುತ್ತಿರುವ ಬಸ್ಸಿನ ಹಿಂಬದಿಗೆ ಗುದ್ದಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಜನರ ಪೈಕಿ ಓರ್ವ ಮಹಿಳೆ ಹಾಗೂ ಇಬ್ಬರಿಗೆ ತೀವ್ರತರವಾದ ಗಾಯವಾಗಿದೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನೆಲ್ಯಾಡಿಯ ಅಶ್ವಿನಿ ಆಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Leave a Reply

error: Content is protected !!