ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜುನಲ್ಲಿ ಗಾಂಧಿ ಜಯಂತಿ

ಶೇರ್ ಮಾಡಿ

ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿಯ ಆಚರಣೆಯು ನಡೆಯಿತು.

ಮಾತನಾಡಿದ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಸತೀಶ್ ಭಟ್ ಅವರು ಮಾತನಾಡಿ “ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರು ಈ ದೇಶ ಕಂಡ ಯುಗಪುರುಷರು. ಇಬ್ಬರೂ ಕೂಡ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮಾಡಿ ದೇಶವನ್ನು ಮುನ್ನಡೆಸಿದವರು. ಪ್ರಬಲ ಇಚ್ಛಾಶಕ್ತಿಯ ಮೂಲಕ ಬಲಿಷ್ಠ ಬ್ರಿಟಿಷರನ್ನು ಮಣಿಸಿದವರು. ವಿದ್ಯಾರ್ಥಿಗಳಾದ ನೀವೆಲ್ಲರೂ ಕೂಡ ಅವರ ಜೀವನದ ಕಥೆಯನ್ನ ಓದಿ ಪ್ರೇರಣೆಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್.ಕೆ, ಎಲ್ಲಾ ಅಧ್ಯಾಪಕರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅವರು ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಿದರು.

Leave a Reply

error: Content is protected !!