ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಡಾ.ಕೆ. ಜಯಕೀರ್ತಿ ಜೈನ್ ನೇಮಕ

ಶೇರ್ ಮಾಡಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ(ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ರಾಜ್ಯ ಸಂಘದ ಅಧ್ಯಕ್ಷ ಡಾ.ಎಲ್ ಭಯರಪ್ಪರವರು ಡಾ.ಕೆ. ಜಯಕೀರ್ತಿ ಜೈನ್, ಧರ್ಮಸ್ಥಳ, ಅವರನ್ನು ನೇಮಕ ಮಾಡಿದ್ದಾರೆ.

ಜಯಕೀತಿ೯ ಜೈನ್ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ.

Leave a Reply

error: Content is protected !!