ಒಕ್ಕೂಟಗಳ ಪದಗ್ರಹಣ ಸಮಾರಂಭ

ಶೇರ್ ಮಾಡಿ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯ ಪ್ರಗತಿ ಬಂದು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟಗಳು ಕಳೆಂಜ ಎ ಮತ್ತು ಕಾಯರ್ತಡ್ಕ ಹಾಗೂ ಜನಜಾಗೃತಿ ವೇದಿಕೆ ಧರ್ಮಸ್ಥಳ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಒಕ್ಕೂಟಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮವನ್ನು ಅ.21ರಂದು ಶ್ರೀ ಉಮಾಮಹೇಶ್ವರ ಕಾಯರ್ತಡ್ಕ ಸಭಾಭವನ ನಡೆಸಲಾಯಿತು.

ಧರ್ಮಸ್ಥಳ ಸುರಕ್ಷಾ ವಿಭಾಗ ಕೇಂದ್ರ ಕಚೇರಿ ಯೋಜನಾಧಿಕಾರಿ ನಾರಾಯಣ ಪಾಟಾಲಿ ಅವರು ಮಾತನಾಡುತ್ತಾ 1982ರ ಮೊದಲು ಜನರ ಬಡತನ ಹಾಗೂ ಕಷ್ಟಗಳನ್ನು ಮನಗಂಡು ಬಡತನ ನಿರ್ಮೂಲನೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಗ್ರಾಮಾಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿದರು ಯೋಜನೆಯಿಂದ ಪಡೆಕೊಂಡ ಸವಲತ್ತುಗಳನ್ನು ಜನರು ಉಪಯೋಗಿಸಿಕೊಂಡು ಕೃಷಿಯಲ್ಲಿ ಅಭಿವೃದ್ಧಿಯನ್ನು ಹೊಂದಿದ್ದಾರೆ ಹಾಗೂ ಮಹಿಳೆಯರು ಅಬಲೆ ಅಲ್ಲ ಸಬಲೇ ಎಂಬುದನ್ನು ಸಾಬೀತುಪಡಿಸಿದ್ದಾರೆ ಹಾಗೂ ಸಮಾಜದಲ್ಲಿ ಮಹಿಳೆಯರು ಗುರುತಿಸಿಕೊಳ್ಳುವಂತ ಕೆಲಸವನ್ನು ಮಾಡಲು ಸಹಕಾರಿಯಾಗಿದೆ, ಜನರ ಜೀವನಮಟ್ಟ ಸುಧಾರಣೆಯಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವತ್ತು ಬಿ ಸಿ ಟ್ರಸ್ಟ್ ಆಗಿ ಕೆಲಸವನ್ನು ನಿರ್ವಹಿಸುತ್ತಿದೆ. ಜನರ ಜೀವನಮಟ್ಟ ಸುಧಾರಣೆಯಾಗಲು ಆರೋಗ್ಯವಂತರಾಗಿ ಬದುಕಬೇಕಾದರೆ ಜೀವನ ಪದ್ಧತಿ ಹಾಗೂ ಆಹಾರ ಪದ್ಧತಿಯನ್ನು ಬದಲಿಸುವಂತಹ ಅನಿವಾರ್ಯತೆ ಇದೆ ಎಂಬುದಾಗಿ ಮಾಹಿತಿ ನೀಡಿದರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಒಗ್ಗಟ್ಟಿನಲ್ಲಿ ಕೆಲಸ ನಿರ್ವಹಿಸಿದಲ್ಲಿ ಒಕ್ಕೂಟದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂಬುದಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳೆಂಜ ಎ ಒಕ್ಕೂಟದ ಅಧ್ಯಕ್ಷ ಚಿನ್ನಮ್ಮ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಅಧ್ಯಕ್ಷ ಆನಂದ ಗೌಡ, ಕಾಯರ್ತಡ್ಕ ಸೈಂಟ್ ಸಬಾಸ್ಟಿಯನ್ ಚರ್ಚ್ ಧರ್ಮಗುರು ಫಾ.ಜೋಸೆಫ್ ವಾಲೂಕರನ್ ಹಾಗೂ ಕಾಯರ್ತಡ್ಕ ಜುಮ್ಮಾ ಮಸೀದಿ ಧರ್ಮಗುರುಗಳು ಹನೀಫ್ ಮದನಿ ಉಪಸ್ಥಿತರಿದ್ದರು

ವಿಜಯಕುಮಾರ್ ಕುಲಾಡಿ. ಬೆಳ್ತಂಗಡಿ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಧರ್ಮಸ್ಥಳ ವಲಯ ಜನಜಾಗೃತಿ ಅಧ್ಯಕ್ಷ ರಾಜೇಶ್ ಎಂ.ಕೆ, ಕಾಯರ್ತಡ್ಕ ಸ.ಪ್ರಾ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷರ ಪ್ರಸನ್ನ.ಎ.ಪಿ , ಒಕ್ಕೂಟದ ಅಧ್ಯಕ್ಷ ಕೊರಗಪ್ಪ ಗೌಡ, ಒಕ್ಕೂಟದ ನೂತನ ಅಧ್ಯಕ್ಷ ಉಮೇಶ್ ಗೌಡ, ಧರ್ಣಪ್ಪ ಕುಂಬಾರ ಹಾಗು ಸೇವಾ ಪ್ರತಿನಿಧಿ ಜನಾರ್ದನ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಕ್ಕೂಟದ ಉಪಾಧ್ಯಕ್ಷ ಹರ್ಷಿತಾ ಸ್ವಾಗತಿಸಿದರು, ಸಂಘದ ಸದಸ್ಯ ಪ್ರಮೋದ್ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರ ವಸಂತ್ ಕಾರ್ಯಕ್ರಮ ನಿರ್ವಹಿಸಿದರು,ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ.ಬಿ ವಂದಿಸಿದರು.

ಸನ್ಮಾನ:
8ವರ್ಷಗಳ ಸುದೀರ್ಘ ಅವಧಿಯಲ್ಲಿ ಉಪವಲಯಾರಣ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸಿದ ಪ್ರಶಾಂತ್ ಹಾಗೂ ನಾಟಿ ವೈದ್ಯಯಾಗಿ ಗುರುತಿಸಿಕೊಂಡಿರುವ ಡೀಕಮ್ಮ ಅವರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

Leave a Reply

error: Content is protected !!