ಮಂಗಳೂರು ಕ್ಯಾಂಪ್ಕೋ ಸಂಸ್ಥೆಯಿಂದ ಚಿಕಿತ್ಸೆಗೆ ಆರ್ಥಿಕ ಧನಸಹಾಯ ವಿತರಣೆ

ಶೇರ್ ಮಾಡಿ

ನೇಸರ ಮಾ.02: ಅಲಂಕಾರು, ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಇದರ ವತಿಯಿಂದ “ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ” ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಮಾ.01ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು.
ಕೊಕ್ಕಡ ಕ್ಯಾಂಪ್ಕೋ ಸದಸ್ಯರಾದ ಅಚ್ಚುತ ಗೌಡ ಕಲೆಂಬಿಕಾಡು-ಪಟ್ರಮೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ.1,98,500/- ಚೆಕ್ ನ್ನು ಸಂಸ್ಥೆಯ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಮುಖ್ಯ ಮಾರುಕಟ್ಟೆ ವ್ಯವಸ್ಥಾಪಕರಾದ ಗೋವಿಂದ ಭಟ್,ಜನಾರ್ಧನ ಪೂಜಾರಿ,ಕ್ಯಾಂಪ್ಕೋ ಅಲಂಕಾರು ಶಾಖೆಯ ಶಾಖಾಧಿಕಾರಿ ಉದಯ.ಬಿ.ಆರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

—ಜಾಹೀರಾತು—

 

Leave a Reply

error: Content is protected !!