
ನೆಲ್ಯಾಡಿ: ಜೇಸಿಐ ನೆಲ್ಯಾಡಿ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಯುವಜನತೆ ಹಾಗೂ ಸುಸ್ಥಿರ ಭವಿಷ್ಯಕ್ಕಾಗಿ ಯುವಜನತೆ ಎಂಬುದರ ಕುರಿತಾಗಿ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷ ಪ್ರಕಾಶ್ ಸ್ವಾಗತಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷೆ ಸುಚಿತ್ರ ಬಂಟ್ರಿಯಲ್ ಅವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಥನಿ ಐಟಿಐ ಪ್ರಾಂಶುಪಾಲರ ಸಜಿ.ಕೆ ತೋಮಸ್ ಅವರು ವಹಿಸಿದ್ದರು. ತರಬೇತುದಾರರಾಗಿ ಪೂರ್ವ ರಾಜ್ಯ ಉಪಾಧ್ಯಕ್ಷರು ಪೂರ್ವ ಅಧ್ಯಕ್ಷರಾದ ಜೇಸಿ ಎಚ್ಜಿಎಫ್ ರವೀಂದ್ರ.ಟಿ ಅವರು ಯುವ ಜನತೆ ದೇಶದ ಬೆನ್ನೆಲುಬು ಯುವ ಜನತೆ ದೇಶದ ಆಸ್ತಿ. ಪ್ರತಿಯೊಬ್ಬನು ದೇಶದ ಉತ್ತಮ ಪ್ರಜೆಯಾಗಬೇಕು. ಎಲ್ಲರೂ ವಿದ್ಯಾವಂತರಾಗಿ ಸ್ವಾವಲಂಬಿಯಾಗಿ ಒಳ್ಳೆಯ ಆಲೋಚನೆ ಮತ್ತು ಒಳ್ಳೆಯ ಕೆಲಸಗಳಿಂದ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಬೇಕು. ಸ್ವಾಮಿ ವಿವೇಕಾನಂದರು ನಮ್ಮೆಲ್ಲರಿಗೂ ಮಾದರಿ ಮತ್ತು ಆದರ್ಶ ಅವರ ಪರಿಕಲ್ಪನೆಯಂತೆ ಜೀವನದುದ್ದಕ್ಕೂ ಒಳ್ಳೆಯ ತತ್ವಗಳನ್ನು ಪಾಲಿಸಿ ಪ್ರತಿಯೊಂದು ಕೆಲಸಕ್ಕೂ ಗುರಿ ಇರಬೇಕು ಪ್ರತಿಯೊಂದು ಸವಾಲುಗಳನ್ನು ಧೈರ್ಯದಿಂದಲೇ ಎದುರಿಸಬೇಕು. ದೇಶಕ್ಕಾಗಿ ನೀನೇನು ಒಳ್ಳೆಯದನ್ನು ಮಾಡಬಹುದು ಎಂದು ಆಲೋಚಿಸಿ ಸ್ವಂತ ನಿರ್ಧಾರಗಳು ತೆಗೆದುಕೊಳ್ಳುವುದು ಅತಿ ಮುಖ್ಯ ಎಂದು ತರಬೇತಿ ನೀಡಿದರು.

ಮುಖ್ಯ ಅತಿಥಿಗಳಾದ ಸಜಿ.ಕೆ ತೋಮಸ್ ಅವರು ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ದೃಢ ನಿರ್ಧಾರ ಇದ್ದರೆ ಏನನ್ನು ಸಾಧಿಸಲು ಸಾಧ್ಯ ಹಾಗೆ ಸದೃಢ ಸಮಾಜವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಬೇಕು ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿರುವಂತಹ ನಿಕಟ ಪೂರ್ವ ಅಧ್ಯಕ್ಷರಾದ ಸುಚಿತ್ರ ಬಂಟ್ರಿಯಲ್ ಅವರು ನಮ್ಮಲ್ಲಿ ಇರುವಂತಹ ಒಳ್ಳೆಯ ಶಕ್ತಿಯನ್ನು ಮುಂದೆ ತರಬೇಕು ಹಾಗೆಯೇ ನಮ್ಮಲ್ಲಿ ಆತ್ಮವಿಶ್ವಾಸ ಇರಬೇಕು ನಮ್ಮಲ್ಲಿ ಧೈರ್ಯವನ್ನು ಬೆಳೆಸಿಕೊಳ್ಳಬೇಕು ಧೈರ್ಯವಿದ್ದರೆ ಏನನ್ನು ಸಾಧಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಜೇಸಿಐ ನೆಲ್ಯಾಡಿಯ ಮಹಿಳಾ ಅಧ್ಯಕ್ಷರಾದ ಜೇಸಿ ಪ್ರವೀಣಿ ಸುಧಾಕರ್ ಶೆಟ್ಟಿ, ಕಾರ್ಯದರ್ಶಿ ನವ್ಯ ಪ್ರಸಾದ್ ನೆಲ್ಯಾಡಿ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರು ಹಾಗೂ ನಿಕಟ ಪೂರ್ವ ಅಧ್ಯಕ್ಷರುಗಳಾದ ಪ್ರಕಾಶ್, ಜೋನ್ ಉಪಸ್ಥಿತರಿದ್ದರು. ಕಾರ್ಯದರ್ಶಿ ನವ್ಯ ಪ್ರಸಾದ್ ನೆಲ್ಯಾಡಿ ವಂದಿಸಿದರು.





