
ನೆಲ್ಯಾಡಿ: ನೆಲ್ಯಾಡಿ ಸಮೀಪ ಹಾಡು ಹಗಲೇ ಕಾಡುಕೋಣವೊಂದು ಕಾಡಿನಿಂದ ನಾಡಿಗೆ ಬಂದು ಜನರಲ್ಲಿ ಭಯದ ವಾತಾವರಣ ಉಂಟು ಮಾಡಿದ ಘಟನೆ ಜ.27ರಂದು ನಡೆದಿದೆ.

ನೆಲ್ಯಾಡಿಯ ಸೈಂಟ್ ಜಾರ್ಜ್ ಕಾಲೇಜು, ಕೊಲ್ಯೊಟ್ಟು ಅಂಗನವಾಡಿ ಇತ್ಯಾದಿ ಸ್ಥಳಗಳಲ್ಲಿ ಕಾಡುಕೋಣ ಓಡಾಡಿ ಶಾಲಾ ಕಾಲೇಜುಗಳಿಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಭಯದ ವಾತಾವರಣ ಉಂಟು ಮಾಡಿದೆ.






