

ಕೊಕ್ಕಡ: ಕನ್ಯಾಡಿ ಸೇವಾಭಾರತಿ(ರಿ.) ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ- ಶಿಶಿಲ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 30ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಫೆ.22ರಂದು ಹತ್ಯಡ್ಕ ಗ್ರಾಮದ ನಾವಳೆ- ಪಾಲೆಂಜ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಪಿಲಿಕಬೆ ಒಂದು ತಿಂಗಳ ಉಚಿತ ಹೊಲಿಗೆ ತರಬೇತಿಯನ್ನು ಪಡೆದುಕೊಂಡು ಸ್ವಾವಲಂಬಿ ಜೀವನವನ್ನು ನಡೆಸಿ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬಹುದು ಎಂದು ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಸ್ವರ್ಣಗೌರಿ ಟೈಲರಿಂಗ್ ಮಾತನಾಡಿ ಮಹಿಳೆಯರಿಗೆ ಯಾವುದಾದರೂ ಒಂದು ಸ್ವ ಉದ್ಯೋಗ ಇದ್ದರೆ ಇಡೀ ಜಗತ್ತಿನಲ್ಲೇ ಸಾಧನೆಯನ್ನು ಮಾಡಬಹುದು, ಇನ್ನು ಸ್ವ ಉದ್ಯೋಗವನ್ನು ಕಲಿತು ಎತ್ತರಕ್ಕೆ ಬೆಳೆಯಿರಿ ಎಂದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ವಿಮಲಾ.ಅರ್ ಶೆಟ್ಟಿ ಮಾತನಾಡಿ ನಾನು ಕಲಿತಂತಹ ವಿದ್ಯೆ ಇನ್ನೊಬ್ಬರಿಗೆ ದಾರಿದೀಪವಾಗಬೇಕು ಎಂದು ಎಲ್ಲಾ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.
ಅರಸಿನಮಕ್ಕಿ ಗ್ರಾ.ಪಂ ಉಪಾಧ್ಯಕ್ಷರಾದ ಸುಧೀರ್ ಕುಮಾರ್, ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಮಹಿಳಾ ಕಾರ್ಯದರ್ಶಿ ನೀತಾ ರಾಧೇಶ್ ಆಚಾರ್ಯ ಮತ್ತು ಅರಸಿನಮಕ್ಕಿ ಆಶಾಕಾರ್ಯಕರ್ತೆ ಕವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು
ವಿಮಲಾ.ಆರ್ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಬಿರಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಒಟ್ಟು 23 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ದಿವ್ಯಜ್ಯೋತಿ ಸ್ವಾಗತಿಸಿದರು, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಕು.ಸುಮ ಕಾರ್ಯಕ್ರಮ ನಿರೂಪಿಸಿದರು, ಟೈಲರಿಂಗ್ ಕವಿತಾ ವಂದಿಸಿದರು.





