ಕಡಬ: ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ

ಶೇರ್ ಮಾಡಿ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಕಡಬ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ ಕಡಬ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಿವಪ್ರಸಾದ್ ಮೈಲೇರಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಮಹೇಶ್.ಕೆ ಸವಣೂರು ವಹಿಸಿ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆಯ ವತಿಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯದ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾದ ಸಂತೋಷ್ ಕೇಂದ್ರ ಒಕ್ಕೂಟದ ಸಮಿತಿ ಅಧ್ಯಕ್ಷರು ಮಾತನಾಡುತ್ತಾ ಪೂಜ್ಯ ಖಾವಂದರು ಲಕ್ಷಾಂತರ ಕುಟುಂಬದ ಬಾಳಿಗೆ ಬೆಳಕಾಗಿದ್ದಾರೆ. ನವಜೀವನ ಸಮಿತಿ ಸದಸ್ಯರು ಕ್ಷೇತ್ರದ ಋಣವನ್ನು ಯಾವತ್ತೂ ಮರೆಯಬಾರದು ಎಂದರು.

ಕಡಬ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗ ಮೇದಪ್ಪ ಗೌಡ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಆಡಳಿತ ಯೋಜನಾಧಿಕಾರಿ ಮಾಧವ ಗೌಡರವರು ಜನಜಾಗೃತಿ ವೇದಿಕೆಯಿಂದ ನಡೆಯುವ ಕಾರ್ಯಕ್ರಮಗಳು ಮತು ನವಜೀವನ ಸಮಿತಿ ಬಲವರ್ಧನೆ ಕುರಿತು ಮಾಹಿತಿ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ವಲಯ ಮಟ್ಟದಲ್ಲಿ ನವಜೀವನ ಸಮಿತಿ ರಚನೆ, ಮನೆ ಭೇಟಿ, ಫ್ರೀ ಕಾನ್ಫರೆನ್ಸ್ ಸಭೆ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನವಜೀವನ ಸಮಿತಿ ಸದಸ್ಯರಾದ ಸುಬ್ರಾಯ ಗೌಡ, ಶ್ರೀಮತಿ ಕಮಲಾ ಸಂಜೀವರವರು ತಮ್ಮ ಜೀವನದ ಅನುಭವವನ್ನು ಹಂಚಿಕೊಂಡರು. ನವಜೀವನ ಸಮಿತಿ ಸದಸ್ಯರಿಗೆ ಜನಜಾಗೃತಿ ವೇದಿಕೆಯಿಂದ ಬ್ಯಾಡ್ಜ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ನವಜೀವನ ಸಮಿತಿ ಪೋಷಕರು, ನವಜೀವನ ಸಮಿತಿ ಸದಸ್ಯರು, ಕುಟುಂಬಸ್ಥರು ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ದಿವಾಕರ್ ಪೂಜಾರಿ ಸ್ವಾಗತಿಸಿ, ರಮೇಶ್ ಕೆ ನಿರೂಪಿಸಿ, ಶ್ರೀಮತಿ ಪ್ರೆಸಿಲ್ಲಾ ವಂದಿಸಿದರು.

  •  

Leave a Reply

error: Content is protected !!