ನೆಲ್ಯಾಡಿ ಜೆಸಿಐಯಿಂದ ಮಹಿಳಾ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ವಿಜೃಂಭಣೆಯಿಂದ ಕೊಲ್ಯೊಟ್ಟು ಅಂಗನವಾಡಿಯಲ್ಲಿ ಆಚರಿಸಲಾಯಿತು.

ದೀಪ ಬೆಳಗಿಸಿ ಸಮಾರಂಭಕ್ಕೆ ಚಾಲನೆ ನೀಡಿ. ಆರೋಗ್ಯ ಇಲಾಖೆಯ ಅಧಿಕಾರಿ ಲೀಲಾ ಮಾತನಾಡಿ, “ಮಹಿಳೆಯರು ಮಾನಸಿಕ ಒತ್ತಡದಿಂದ ಮುಕ್ತರಾಗುವ ಮೂಲಕ ತಮ್ಮ ಜೀವನವನ್ನು ಉನ್ನತಿಗೆ ಕೊಂಡೊಯ್ಯಬೇಕು. ಅವರು ನಾಲ್ಕು ಗೋಡೆಯ ನಡುವೆ ಸೀಮಿತವಾಗದೆ, ಸಮಾಜದಲ್ಲಿ ತಮ್ಮ ಆದ್ಯತೆ ಹಾಗೂ ಸ್ಥಾನಮಾನವನ್ನು ಗಳಿಸಬೇಕು,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೃಷಿಯಲ್ಲಿ ಮಹತ್ವದ ಸಾಧನೆ ಮಾಡಿರುವ ಸುಂದರಿಯಮ್ಮನಿಗೆ ಗೌರವಾರ್ಪಣೆ ಮಾಡಲಾಯಿತು. ಮಹಿಳಾ ದಿನಾಚರಣೆಯ ಮಹತ್ವವನ್ನು ಪ್ರವೀಣಿ ವಿವರಿಸಿದರು. ನಂತರ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಅಧ್ಯಕ್ಷೆ ಪ್ರವಿಣಿ, ಸುಚಿತ್ರ ಬಂಟ್ರಿಯಲ್, ಆರೋಗ್ಯ ಇಲಾಖೆಯ ಅಧಿಕಾರಿ ಲೀಲಾ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಜಯಂತಿ, ಜೆಸಿಐ ಕಾರ್ಯದರ್ಶಿ ನವ್ಯ ಪ್ರಸಾದ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಜೆಸಿಐ ಸದಸ್ಯರು, ಅಂಗನವಾಡಿ ಸಿಬ್ಬಂದಿ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಪುಟಾಣಿಗಳು ಹಾಗೂ ಸ್ಥಳೀಯರು ಭಾಗವಹಿಸಿ, ಮೆರವಣಿಗೆಯ ಮೂಲಕ ಮಹಿಳಾ ದಿನಾಚರಣೆಯ ಮಹತ್ವವನ್ನು ಸಾರಿದರು.

ವಸಂತಿಯವರು ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆಯಾದ ಸಂಪಾವತಿ ಕಾರ್ಯಕ್ರಮವನ್ನು ನಿರೂಪಿಸಿದರು. ಜೆಸಿಐ ಕಾರ್ಯದರ್ಶಿ ನವ್ಯ ಪ್ರಸಾದ್ ಧನ್ಯವಾದ ಅರ್ಪಿಸಿದರು.

  •  

Leave a Reply

error: Content is protected !!