

ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ, ಪುತ್ತೂರು ವಿಭಾಗದ ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿ ಪ್ರಭಾಕರ್ ಎಚ್. ಆರಂಬೋಡಿ ಅವರು ಭರ್ಜರಿ ಮತಗಳಿಂದ ಜಯಶಾಲಿಯಾಗಿ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಪ್ರಭಾಕರ್ ಎಚ್. ಆರಂಬೋಡಿ ಅವರು ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದು, ಆರಂಬೋಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಪ್ರಸ್ತುತ ಅವರು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.












