

ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕನ್ನಡಿಗ ಡಾ.ಎಂ.ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ಎಂ.ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ.
ಡಾ.ಎಂ.ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ.ಎಂ.ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್ ಅಧಿಕಾರಿ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.
ಡಾ.ಅಲೋಕ್ ಮೋಹನ್ ಅವರಿಗೆ ಗೌರವ ಪಥಸಂಚಲನ ಮೂಲಕ ಬೀಳ್ಕೊಡಲಾಗುತ್ತದೆ. ಅಲೋಕ್ ಮೋಹನ್ ಅವರ ಅವಧಿ ಏಪ್ರಿಲ್ಗೆ ಮುಕ್ತಾಯವಾಗಿದ್ದರೂ ಡಿಜಿಪಿಯಾಗಿ ಎರಡು ವರ್ಷದ ಅವಧಿ ಮುಗಿಸುವ ಉದ್ದೇಶದಿಂದ ಮೂರು ವಾರಗಳ ಕಾಲ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿತ್ತು.
ಡಾ.ಎಂ.ಎ ಸಲೀಂ ಅವರು 1966ರ ಜೂನ್ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಡಾ.ಎಂ.ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಸಿಐಡಿ ಡಿಜಿಪಿಯಾಗಿದ್ದರು.

ಹೆದ್ದಾರಿ ಬದಿಯ ಮನೆಯ ಗೇಟು ಬಳಿ ಕಾಡಾನೆಗಳು ನಿಂತು ರಸ್ತೆಯನ್ನು ದಾಟಲು ಯತ್ನಿಸುತ್ತಿದ್ದು, ಈ ವೇಳೆ ವಾಹನಗಳು ಸಂಚರಿಸುತ್ತಿರುವ ದೃಶ್ಯಗಳು ದೃಢವಾದ ಸಾಕ್ಷ್ಯವಾಗಿವೆ. ಈ ಪ್ರದೇಶದಲ್ಲಿ ಈ ಮೊದಲು ಕೂಡ ಕಾಡಾನೆಗಳ ಅಟ್ಟಹಾಸ ಕಂಡು ಬಂದಿದ್ದು, ಕೃಷಿ ತೋಟಗಳಿಗೆ ಹಾನಿಯೂ ಉಂಟಾಗಿದೆ.
ಸ್ಥಳೀಯ ಕೃಷ್ಣ ಮುರಾರಿ ಅವರು, “ಇಷ್ಟು ದಿನಕ್ಕೂ ಯಾವುದೇ ನಿರ್ದಿಷ್ಟ ಕಾರ್ಯಾಚರಣೆ ಫಲ ನೀಡಿಲ್ಲ. ಕಾಡಾನೆಗಳು ಆಗ ಬಂದು ಹಾನಿ ಮಾಡುತ್ತವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೆರ್ನಾಜೆಯ ಕುಮಾರ್ ಅವರೂ, “ಇಲ್ಲಿಯ ಜೀವನದ ಅವಿಭಾಜ್ಯ ಭಾಗವೇ ಈಗ ಕಾಡಾನೆ ಭಯ. ನಿತ್ಯವೂ ಎಲ್ಲಿ ಕಾಡಾನೆ ಬರುತ್ತದೆ ಎಂಬ ಆತಂಕದಲ್ಲಿ ಬದುಕುತ್ತಿದ್ದೇವೆ” ಎಂದು ದುಃಖಿಸಿದರು.
ಈ ಹಿಂದೆ ಎಪ್ರಿಲ್ 29ರಂದು ಅರ್ತ್ಯಡ್ಕದಲ್ಲಿ ಕಾಡಾನೆಯೊಂದು ಮಹಿಳೆಯನ್ನು ಕೊಂದು ಹಾಕಿದ್ದ ಹಿನ್ನಲೆಯಲ್ಲಿ, ಚಿಕ್ಕಮಗಳೂರಿನಿಂದ ಇಟಿಎಫ್ (ಎಲಿಫೆಂಟ್ ಟ್ಯಾಸ್ಕ್ ಫೋರ್ಸ್) ತಂಡವನ್ನು ಕರೆಸಿ ಕಾರ್ಯಾಚರಣೆ ನಡೆಸಲಾಗಿತ್ತು. ಮೇ 5 ರಿಂದ ಕಾರ್ಯಾರಂಭಿಸಿ, ಇತ್ತೀಚೆಗೆ ಅದು ಅಂತ್ಯಗೊಂಡಿತ್ತು. ಆದರೆ ಅದರ ಬೆನ್ನಲ್ಲೇ ಮತ್ತೆ ಕಾಡಾನೆಗಳು ಆನೆಗುಂಡಿ ಪರಿಸರದಲ್ಲಿ ಕಾಣಿಸಿಕೊಂಡಿರುವುದು ಹಲವರಿಗೆ ಅಚ್ಚರಿ ತಂದಿದೆ.
ಇಟಿಎಫ್ ಹಾಗೂ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆಯು ಈಗ ಕಾಡಾನೆಗಳನ್ನು ಕನಕಮಜಲು ಅರಣ್ಯ ಭಾಗ ಅಥವಾ ಕೇರಳದ ಅರಣ್ಯ ಪ್ರದೇಶಕ್ಕೆ ತಿರುಗಿಸೋಲುವ ಪ್ರಯತ್ನದಲ್ಲಿದೆ. ಆದರೆ ಇಂತಹ ಕಾರ್ಯಾಚರಣೆಗಳು ಯಶಸ್ವಿಯಾಗದೇ ಇದ್ದರೆ, ಹತ್ತಿರದ ಗ್ರಾಮಗಳಲ್ಲಿ ಆತಂಕ ಇನ್ನಷ್ಟು ಹೆಚ್ಚಾಗಲಿದೆ ಎಂಬುದರ ಬಗ್ಗೆ ಸ್ಥಳೀಯರು ಗಂಭೀರ ಚಿಂತೆ ವ್ಯಕ್ತಪಡಿಸುತ್ತಿದ್ದಾರೆ.












