

ಕಡಬ: ರಾಜ್ಯ ಹೆದ್ದಾರಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ಮಾರ್ಗದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 23 ವರ್ಷದ ಯುವಕನೊಬ್ಬ ದುರ್ಮರಣ ಹೊಂದಿದ ಘಟನೆ ದುರಂತವನ್ನುಂಟುಮಾಡಿದೆ. ಘಟನೆಯು ಕಡಬ ಸಮೀಪದ ಹಳೆ ಸ್ಟೇಷನ್ ಬಳಿ ಸಂಭವಿಸಿದ್ದು, ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ.
ಬಿಶ್ವಜಿತ್ ಮರ್ದಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ಕೆಲಸ ಮಾಡಿಕೊಂಡಿದ್ದನು. ಸೋಮವಾರ ರಾತ್ರಿ ನಿತ್ಯದಂತೆ ಕೆಲಸ ಮುಗಿಸಿ ಬೈಕ್ನಲ್ಲಿ ಮನೆ ಕಡೆಗೆ ಹೊರಟಿದ್ದ ಅವನು ಕಡಬ ಬಳಿ ಹಳೆ ಸ್ಟೇಷನ್ ಬಳಿ ಹಿಂದಿನಿಂದ ಬರುವ ಕೆಎಸ್ಸಾರ್ಟಿಸಿ ಬಸ್ ಒಂದು ಓಮಿನಿ ಕಾರು ಅನ್ನು ಓವರ್ಟೇಕ್ ಮಾಡಿ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬಿಶ್ವಜಿತ್ ನ ಬೈಕ್ಗೆ ಡಿಕ್ಕಿ ಹೊಡೆದಿದೆ.
ಸ್ಥಳೀಯರು ತಕ್ಷಣ ಕಡಬ ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.













