ಕಾರಿಗೆ ಬಸ್ ಡಿಕ್ಕಿ, ಮೂವರಿಗೆ ಗಾಯ

ಶೇರ್ ಮಾಡಿ

ಪುತ್ತೂರು: ಪುತ್ತೂರು ಹೊರವಲಯದ ಮುರದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮನೆಯಲ್ಲೇ ನಡೆಯುತ್ತಿದ್ದ ಶ್ರಾದ್ಧ ಕಾರ್ಯಕ್ರಮಕ್ಕಾಗಿ ಬಂದಿರುವ ಮಗಳು ಮತ್ತು ಮೊಮ್ಮಗಳನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಈಶ್ವರ ಭಟ್ ಎಂಬವರು ಮಂಗಳವಾರ ಬೆಳಿಗ್ಗೆ ತಮ್ಮ ಮನೆಯ ಶ್ರಾದ್ಧ ಕಾರ್ಯಕ್ರಮಕ್ಕಾಗಿ ಬೆಂಗಳೂರಿನಿಂದ ಬಂದ ಮಗಳು ಮತ್ತು ಮೊಮ್ಮಗಳನ್ನು ಕರೆತರಲು ತಮ್ಮ ಕಾರಿನಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ ತೆರಳಿದ್ದರು. ಅವರು ಮನೆಗೆ ಹಿಂತಿರುಗುವ ವೇಳೆಯಲ್ಲಿ ಮುರದ ಸಮೀಪದಲ್ಲಿದ್ದಾಗ, ಹಿಂದಿನಿಂದ ಬಂದ ಬಸ್‌ವು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಧ್ವಂಸಗೊಂಡಿದ್ದು, ಕಾರಿನಲ್ಲಿದ್ದ ಈಶ್ವರ ಭಟ್ ಹಾಗೂ ಅವರ ಕುಟುಂಬದ ಇಬ್ಬರು ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ.

  •  

Leave a Reply

error: Content is protected !!