ಆಲಂಕಾರು: ವಿದ್ಯಾರ್ಥಿಗಳಿಗೆ 3 ದಿನದ ಉಚಿತ ಶಿಬಿರ ಉದ್ಘಾಟನೆ

ಶೇರ್ ಮಾಡಿ

ಆಲಂಕಾರು: ಮನಸ್ಸು ಎಂಬುವುದು ಒಳ್ಳೆಯದು ಮತ್ತು ಕೆಟ್ಟದ್ದನ್ನು ನಿರ್ಣಯಿಸುವ ಶಕ್ತಿಯನ್ನು ಹೊಂದಿದೆ. ಸರಿಯಾದ ಮಾರ್ಗದಲ್ಲಿ ಹೋದಲ್ಲಿ ಯಶಸ್ಸು ನಮ್ಮದಾಗುತ್ತದೆ. ಮನಸ್ಸನ್ನು ಯೋಗ್ಯ ರೀತಿಯಲ್ಲಿ ಇಟ್ಟುಕೊಳ್ಳುವಂತೆ ಮಕ್ಕಳಿಗೆ ಪ್ರಾರಂಭದಲ್ಲಿ ಇಂಥ ಶಿಬಿರಗಳಿಂದ ದೊರೆಯುತ್ತದೆ. ಸಮಾಜಕ್ಕೆ ಪೂರಕವಾದ ವಾತಾವರಣವು ನಿರ್ಮಾಣವಾಗಲು ಇಂತಹ ಶಿಬಿರದಿಂದ ಸಾಧ್ಯವಾಗಿದೆ ಎಂದು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್, ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಹಾಗೂ ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಆಲಂಕಾರು ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ 3 ದಿನದ ಉಚಿತ ಶಿಬಿರವನ್ನು ಈ ಭಾರತಿ ವಿದ್ಯಾಸಂಸ್ಥೆ ಆಲಂಕಾರುನಲ್ಲಿ ಮೇ 26ರಂದು ಆರಂಭಗೊಂಡ ಶಿಬಿರವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಅಧ್ಯಕ್ಷ ಮಹೇಶ್ ಕೆ ಸವಣೂರು, ವಕೀಲರು ವಹಿಸಿ ಮಾತನಾಡಿದ ಅವರು ಕೇವಲ ಶಿಕ್ಷಣವಿದ್ದರೆ ಮಾತ್ರ ಸಾಲದು ಶಿಕ್ಷಣದೊಂದಿಗೆ ಸಂಸ್ಕಾರವು ಅತಿ ಅವಶ್ಯವಾಗಿದೆ. ಸಂಸ್ಕಾರಯುತ ಜೀವನ ನಡೆಸಲು ಎಳವಿಯಲ್ಲಿಯೇ ಮಕ್ಕಳು ಹೆಚ್ಚು ಹೆಚ್ಚು ಇಂಥ ಶಿಬಿರಗಳಲ್ಲಿ ಪಾಲ್ಗೊಂಡಾಗ ಕಲಿಯಲು ಸಾಧ್ಯವಾಗುತ್ತದೆ. ನಮ್ಮನ್ನು ಪ್ರೀತಿಸುವವರನ್ನು ನಾವು ಗೌರವಿಸಬೇಕು ಎಂದರು.

ವೇದಿಕೆಯಲ್ಲಿ ಅಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ. ಸುರೇಶ್ ಕುಮಾರ್ ಕೂಡೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ದ.ಕ. ಜಿಲ್ಲೆ -2 ನಿರ್ದೇಶಕ ಎ.ಬಾಬು ನಾಯ್ಕ, ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷ ಈಶ್ವರ ಗೌಡ ಪಡ್ಯಡ್ಕ, ಅಲಂಕಾರು ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಇಂದುಶೇಖರ ಶೆಟ್ಟಿ, ಕಡಬ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಕರುಣಾಕರ ಗೋಗಟೆ, ಕಡಬ ತಾಲ್ಲೂಕು ಯುವಜನ ಒಕ್ಕೂಟ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ, ಕಡಬ ಅಖಿಲ ಕರ್ನಾಟಕ ಜನಜಾಗೃತಿ ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ತಂಡದವರು, ವಲಯ ಮೇಲ್ವಿಚಾರಕರು, ಶಾಲಾ ಶಿಕ್ಷಕಿಯರು ಹಾಗೂ ಶಿಬಿರಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು. ಕಡಬ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಅಲಂಕಾರು ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಇಂದುಶೇಖರ ಶೆಟ್ಟಿ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಿಬಿರಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನಡೆಸಲಾಯಿತು.

  •  

Leave a Reply

error: Content is protected !!