ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

ಶೇರ್ ಮಾಡಿ

ನೆಲ್ಯಾಡಿ :ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿಯಲ್ಲಿ ಬುಧವಾರದಂದು ಕಾಲೇಜು ವಾರ್ಷಿಕೋತ್ಸವದ ವಿಜೃಂಭಣೆಯಿಂದ ಜರುಗಿತು.

ಕಾಲೇಜು ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಉಷಾ ಅಂಚನ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಉದಯ್, ಅನುಷ್ಠಾನ ಸಮಿತಿಯ ಖಜಾಂಜಿಯಾದ ವಿಶ್ವನಾಥ್ ಶೆಟ್ಟಿ, ಸಮಿತಿಯ ಸದಸ್ಯರಾದ ಸತೀಶ್ ಹಾಗೂ ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ಸೇಸಮ್ಮ ಗಣ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕರಾದ ಡಾ.ಸುರೇಶ್ ವಹಿಸಿದ್ದರು. ಅವರು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮಾಡಿದ ಕಾರ್ಯಕ್ರಮಗಳ ಮಹತ್ವವನ್ನು ವಾಸ್ತವಿಕವಾಗಿ ವಿಶ್ಲೇಷಿಸಿದರು. ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಫಲಕ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು.

ಉಪನ್ಯಾಸಕಿ ಚಂದ್ರಕಲಾ ಸ್ವಾಗತಿಸಿದರು. ಉಪನ್ಯಾಸಕ ಡಾ.ಸೀತಾರಾಮ ಅವರು ವರದಿಯನ್ನು ಮಂಡಿಸಿದರು ಉಪನ್ಯಾಸಕ ಸಚಿನ್ ಎನ್ ಟಿ ವಂದಿಸಿದರು. ಉಪನ್ಯಾಸಕಿ ಶ್ರುತಿ ಹಾಗೂ ಪಾವನ ರೈ ನಿರೂಪಿಸಿದರು. ಈ ಸಂದರ್ಭ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಅನುಷ್ಠಾನ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪೋಷಕರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದರು.

  •  

Leave a Reply

error: Content is protected !!