

ಪುತ್ತೂರು: ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭೀಕರ ಭೂಕುಸಿತವಾಗಿದೆ. ಬೆಳ್ಳಿಪ್ಪಾಡಿ-ಕಠಾರ-ಕೋಟೆಲು ಭಾಗಕ್ಕೆ ಸಂಪರ್ಕಿಸುವ ಸಕಲೇಶ್ವರ ದೇವಸ್ಥಾನದ ಬಳಿಯ ಗುತ್ತಿನಮನೆ ಎಂಬಲ್ಲಿ ರಸ್ತೆಗೆ ಧರೆ ಕುಸಿದುಬಿದ್ದು ಸಂಪರ್ಕ ಕಡಿತವಾಗಿದೆ. ಮಣ್ಣು ಕೆಳಗಿನ ತೋಟಗಳಿಗೂ ನುಗ್ಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ಸ್ಥಳದಲ್ಲಿ ಭೂಕುಸಿತ ಸಂಭವಿಸಿತ್ತು.
ಮೇಲ್ಬಾಗದಲ್ಲಿ ಎರಡು ಮನೆಗಳು ತೀರ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ರಸ್ತೆಯನ್ನು ಉಪಯೋಗಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.
ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಇಲ್ಲಿಗೆ ಸೂಕ್ತ ಎಚ್ಚರಿಕೆ ಕ್ರಮ ಕೈಗೊಳ್ಳುವಂತೆ ಊರವರು ಒತ್ತಾಯಿಸಿದ್ದಾರೆ













