ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಶೇರ್ ಮಾಡಿ

ಉದನೆ: ಇಲ್ಲಿನ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಪ್ರೌಢ ಶಾಲೆ ಮತ್ತು ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಕಲಿಕಾ ಆಸಕ್ತಿಯ ಉತ್ತೇಜನ ಮತ್ತು ಅಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸಲು ಪ್ರೇರಣಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಮ್ಯಾಥ್ಯೂ ಅವರು ಭಾಗವಹಿಸಿದರು. ತಮ್ಮ ಜೀವನದ ನೈಜ ಅನುಭವಗಳಾಧಾರಿತ ಪ್ರೇರಣಾದಾಯಕ ಮಾತುಗಳ ಮೂಲಕ ಅವರು ವಿದ್ಯಾರ್ಥಿಗಳಿಗೆ ಬಹುಮುಖ ಮಾಹಿತಿ ನೀಡಿದರು. “ಸಾಧಿಸುವ ಛಲವೊಂದಿದ್ದರೆ ಯಾವುದೂ ಕಷ್ಟವಲ್ಲ. ದೃಢ ಸಂಕಲ್ಪವೇ ಯಶಸ್ಸಿನ ಮಾರ್ಗದೀಪ,” ಎಂದು ತಮ್ಮ ಮಾತಿನಲ್ಲಿ ಮ್ಯಾಥ್ಯೂ ಅವರು ವಿದ್ಯಾರ್ಥಿಗಳಿಗೆ ಬೋಧಿಸಿದರು. ಅವರ ಉಜ್ಜ್ವಲ ಸಂದೇಶಗಳು ವಿದ್ಯಾರ್ಥಿಗಳಲ್ಲಿ ಹೊಸ ಹಂಬಲ ಮತ್ತು ಆತ್ಮವಿಶ್ವಾಸವನ್ನು ತುಂಬಿದವು. ಇದೇ ಸಂದರ್ಭದಲ್ಲಿ ಪಾಲಕರಿಗೂ ಉಪಯುಕ್ತ ಸಲಹೆಗಳನ್ನು ನೀಡಲಾಯಿತು. ಮಕ್ಕಳಿಗೆ ಉತ್ತಮ ಪಾಠದ ಮೌಲ್ಯ ಹಾಗೂ ಮನೋಬಲ ತುಂಬುವುದು ಅತ್ಯಂತ ಅಗತ್ಯವೆಂದು ಅವರು ಒತ್ತಿಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್, ಸೈಂಟ್ ಆಂಟನೀಸ್ ಪ್ರೌಢಶಾಲೆಯ ಮುಖ್ಯಗುರು ಶ್ರೀಧರ ಗೌಡ, ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ಮುಖ್ಯಗುರು ಸಿಬಿಚ್ಚನ್ ಟಿ.ಸಿ, ಶಿಕ್ಷಕ ವೃಂದ ಹಾಗೂ ಹಲವಾರು ಪಾಲಕರು ಉಪಸ್ಥಿತರಿದ್ದರು.

  •  

Leave a Reply

error: Content is protected !!