

ನೆಲ್ಯಾಡಿ: ಉದನೆ ಬಿಷಪ್ ಪೋಳಿಕಾರ್ಪೋಸ್ ಕಿಂಡರ್ ಗಾರ್ಟನ್ನಲ್ಲಿ ಎಲ್ಕೆಜಿ ಮತ್ತು ಯುಕೆಜಿ ವಿಭಾಗದ ಪುಟಾಣಿ ಮಕ್ಕಳಿಗೆ ಪ್ರವೇಶೋತ್ಸವ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಪುಟಾಣಿ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯಗಳ ಮೆರವಣಿಗೆಯಲ್ಲಿ ತರಗತಿ ಕೋಣೆಗಳಿಗೆ ಕರೆತರಲಾಯಿತು. ಶಾಲೆಯ ಸಂಚಾಲಕರಾದ ರೆ.ಫಾ. ಹನಿ ಜೇಕಬ್ ಅವರು ಕಲಿಕೆಗೆ ಮೊದಲ ಹೆಜ್ಜೆ ಇಡುತ್ತಿರುವ ಪುಟಾಣಿಗಳ ಕೈ ಹಿಡಿದು ಅಕ್ಷರ ಜ್ಞಾನದ ಮುನ್ನುಡಿ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿ ಹರಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಜಾನ್ ಕೆ.ಕೆ, ಮುಖ್ಯಶಿಕ್ಷಕ ಸಿಬಿಚ್ಚನ್ ಟಿ.ಸಿ, ಕೆ.ಜಿ ವಿಭಾಗದ ಮುಖ್ಯಸ್ಥರಾದ ವಿನೀತಾ ತಂಗಚ್ಚನ್, ಶಿಕ್ಷಕ ಶಿಕ್ಷಕೇತರ ವೃಂದ ,ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ರಮ್ಯಾ ಸ್ವಾಗತದರು, ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅನ್ನಮ್ಮ ವಂದಿಸಿದರು.










