

ಕಡಬ: ಕಡಬ ಕ್ನಾನಯಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರದಂದು 2025–26ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಸಭೆ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಸುಬ್ರಮಣ್ಯೇಶ್ವರ ಪ್ರೌಢಶಾಲೆ, ಸುಬ್ರಮಣ್ಯ ಇದರ ನಿವೃತ್ತ ಮುಖ್ಯೋಪಾಧ್ಯಾಯರಾದ ಯಶವಂತ ರೈ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪೋಷಕರಿಗೆ ಅವರ ಕರ್ತವ್ಯಗಳು, ಮಕ್ಕಳ ಭವಿಷ್ಯದ ರೂಪುಗೊಳಿಸುವಿಕೆಯಲ್ಲಿ ಅವರ ಪಾತ್ರದ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು.
ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಾ ಲೂಯಿಸಾ ಹಾಗೂ ಶಾಲಾ ಸಂಚಾಲಕರಾದ ವಂ.ಫಾ ಜಿಸ್ಮೋನ್ ಜೋಸ್ ಉಪಸ್ಥಿತರಿದ್ದರು. ಈ ವೇಳೆ ನೂತನ ಶಿಕ್ಷಕ-ರಕ್ಷಕ ಸಂಘವನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ರತೀಶ್ ಎಸ್ ಕುಟ್ರುಪಾಡಿ ಹಾಗೂ ಉಪಾಧ್ಯಕ್ಷರಾಗಿ ರಮ್ಯ ಅಮೈ ಆಯ್ಕೆಯಾಗಿದರು.
2024–25ನೇ ಶೈಕ್ಷಣಿಕ ಸಾಲದಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 620 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಗ್ರೀಷ್ಮಾ ಪಿ. ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಹಿರಿಯ ಶಿಕ್ಷಕರಾದ ಕುಸುಮಾಧರ ಸ್ವಾಗತಿಸಿದರು. ಶಿಕ್ಷಕ ಶೈಜು ಮತ್ತು ಶಿಕ್ಷಕಿ ಉಷಾ ಕುಮಾರಿ ವಂದನಾರ್ಪಣೆ ಮಾಡಿದರು. ಶಿಕ್ಷಕಿ ದುರ್ಗಸರಿತ ಕಾರ್ಯಕ್ರಮ ನಿರೂಪಿಸಿದರು. ಪೋಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.










