ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆ ರಕ್ಷಕ ಶಿಕ್ಷಕ ಸಂಘದ ಸಭೆ

ಶೇರ್ ಮಾಡಿ

ಕಡಬ: ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025 -26ನೇ ಶೈಕ್ಷಣಿಕ ವರ್ಷದ ಪ್ರಥಮ ಸಭೆಯನ್ನು ನಡೆಸಲಾಯಿತು.

ನೂತನ ಶೌಚಾಲಯದ ಕೊಠಡಿಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮಣಗೌಡ ಸಾಂತ್ಯಡ್ಕ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶಾಲಾ ಸಂಚಲಕರಾದ ರೆ.ಫಾ.ಪೌಲ್ ಜೇಕಬ್ ಅವರು ವಹಿಸಿದರು. ವಾರ್ಷಿಕ ಯೋಜನೆಯನ್ನು ವಿವರಿಸುತ್ತಾ ಮಕ್ಕಳ ಭವಿಷ್ಯವನ್ನು ನಿರೂಪಿಸಲು ಸಂಸ್ಥೆಯೊಂದಿಗೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿ ಹಾಗೂ ಶೈಕ್ಷಣಿಕ ಸಲಹೆಗಾರರಾದ ಮ್ಯಾತ್ಯು ಟಿ.ಜಿ ಮಾತನಾಡಿ, ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಕರ್ತವ್ಯಗಳು ಹೆಚ್ಚಿನ ಪಾತ್ರವನ್ನು ವಹಿಸುತ್ತದೆ ಎಂದು ವಿವರವಾಗಿ ತಿಳಿಸಿದರು. ಮುಖ್ಯಶಿಕ್ಷಕರಾದ ಅರುಳ್ ಸಾಮಿ ಹಾಗೂ ಆಡಳಿತ ಮಂಡಳಿಯ ಕಾರ್ಯದರ್ಶಿ ಸಜಿ ವಿ.ಜೆ ಹಾಗೂ ಖಜಾಂಚಿಯಾದ ವಿನೋದ್ ಟಿ.ಟಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

ಈ ವೇಳೆ ನೂತನ ಶಿಕ್ಷಕರಕ್ಷಕ ಸಂಘವನ್ನು ರಚಿಸಲಾಗಿದ್ದು ಅಧ್ಯಕ್ಷರಾಗಿ ಮೂರನೇ ಬಾರಿ ಲಕ್ಷ್ಮಣ ಗೌಡ ಸಾಂತ್ಯಡ್ಕ ಹಾಗೂ ಉಪಾಧ್ಯಕ್ಷರಾಗಿ ಸಿಜಿ ಜಿನ್ಸನ್ ಆಯ್ಕೆಯಾದರು.

2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 596 ಅಂಕಗಳಿಸಿದ ವಿದ್ಯಾರ್ಥಿನಿ ಶ್ರೇಯಶ್ರೀ ರೈ ಹಾಗೂ ಸಂಸ್ಥೆಯಲ್ಲಿ 12ವರ್ಷ ಸಹಶಿಕ್ಷಕಿಯಾಗಿ ಹಾಗೂ 2 ವರ್ಷಗಳ ಕಾಲ ಮುಖ್ಯಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿರ್ಗಮಿಸಿದ ಜ್ಯೋತಿ.ಎಸ್.ಕೆ ಅವರನ್ನು ಸನ್ಮಾನಿಸಲಾಯಿತು.

ಸಹ ಶಿಕ್ಷಕಿಯಾದ ಪ್ರಿಯ ಸ್ವಾಗತಿಸಿದರು. ಶಿಕ್ಷಕಿ ಸ್ನೇಹಾ ವಂದನಾರ್ಪಣೆ ಮಾಡಿದರು. ಶಿಕ್ಷಕಿ ವಿದ್ಯಾ ಕೆ.ಕಾರ್ಯಕ್ರಮ ನಿರೂಪಿಸಿದರು. ಪೋಷಕರು ಮತ್ತು ಶಿಕ್ಷಕ ವಂದಿಸಿದರು.

  •  

Leave a Reply

error: Content is protected !!