ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!

ಶೇರ್ ಮಾಡಿ

ಉಡುಪಿ: ಪತ್ನಿ ಹೆಚ್ಚು ಸಮಯ ಮೊಬೈಲ್ ಬಳಸುತ್ತಾಳೆ ಎಂದು ಪತಿ ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಗಣೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ಹೆಚ್ಚಿನ ಸಮಯ ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ, ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ, ಆರೋಪಿ ಕತ್ತಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಇನ್ನೂ ಆರೋಪಿ ವಿಪರೀತ ಮದ್ಯ ವ್ಯಸನಿಯಾಗಿದ್ದ ಎಂದು ತಿಳಿದುಬಂದಿದೆ.

ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಡುಪಿ ಎಸ್‍ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯ ಮೃತದೇಹವನ್ನು ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

  •  

Leave a Reply

error: Content is protected !!