



ಕೊಕ್ಕಡ: ರಾಜ್ಯ ಸರಕಾರದ ಜನ ವಿರೋಧಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿ ಕೊಕ್ಕಡ ಗ್ರಾ.ಪಂ. ಮುಂಭಾಗ ಬಿ.ಜೆ.ಪಿ. ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ ಜರುಗಿತು. ವಿವಿಧ ಸಮಸ್ಯೆಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸರ್ಕಾರದ ನಿರ್ಲಕ್ಷ್ಯ ನಿಲುವನ್ನು ತೀವ್ರವಾಗಿ ಟೀಕಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಗಣೇಶ್ ಕೆ ಹೊಸ್ತೋಟ, “ನಾಡಿನ ಬಡಜನರ ಸಮಸ್ಯೆಗಳನ್ನು ಈ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ನೈನ್ 11 ನಿವೇಶನಗಳ ಸಮಸ್ಯೆಗಳು, ಅಕ್ರಮ ಸಕ್ರಮ ಸಮಸ್ಯೆಗಳು, ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆ ಸಮಸ್ಯೆ ವೃದ್ಧಾಪ್ಯ ವೇತನ ಸಂಧ್ಯಾ ಸುರಕ್ಷಾ ಹಣ ಬಿಡುಗಡೆ ಸಮಸ್ಯೆ, ಬಿಪಿಎಲ್ ಕಾರ್ಡ್ಗಳನ್ನು ನಿರ್ಧಾರವಿಲ್ಲದೆ ರದ್ದುಗೊಳಿಸಲಾಗುತ್ತಿದೆ. ಜನರ ಜೀವನವೇ ಪ್ರಶ್ನಾರ್ಥವಾಗುತ್ತಿದೆ” ಎಂದರು.
ಪಕ್ಷದ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ, ಬೂತ್ ಅಧ್ಯಕ್ಷ ಕಿರಣ್ ಬಲ್ತಿಮಾರ್, ಲಿಂಗಪ್ಪ ಗೌಡ ಕಡೀರ, ಕಾರ್ಯದರ್ಶಿಗಳು ರವಿ ಪುಡಿಕೆತ್ತೂರ್, ಶ್ರೀಧರ್ ಬಲಕ್ಕ, ಕಿಶೋರ್ ಪೋಯ್ಯೋಲೆ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳಂಬಿಲ,ಗ್ರಾ.ಪಂ. ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಯುವಮೋರ್ಚಾ ಸದಸ್ಯ ರಂಜು ಕೊಕ್ಕಡ ಸೇರಿದಂತೆ ಹಲವು ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರತಿಭಟನೆಯಲ್ಲಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಅವರ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು.







