


ನೆಲ್ಯಾಡಿ: ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್ಗೆ ದೋಟಿ ತಗುಲಿ ವ್ಯಕ್ತಿಯೋರ್ವ ಶಾಕ್ಗೆ ಒಳಗಾಗಿ ಮೃತಪಟ್ಟ ದುರ್ಘಟನೆ ಶನಿವಾರದಂದು ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಅರಸಿನಮಕ್ಕಿ ಸಮೀಪದ ಉಡ್ಯೆರೆ ನಿವಾಸಿ ಕೃಷ್ಣಪ್ಪ ಕುಲಾಲ್(49) ಎಂದು ಗುರುತಿಸಲಾಗಿದೆ. ಅವರು ತೋಟದಲ್ಲಿ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸುತ್ತಿರುವ ಸಂದರ್ಭ ದೋಟಿ ಎತ್ತರಕ್ಕೆ ಹೋಗಿ ಅಲ್ಲಿರುವ ಎಚ್ಟಿಐ ಲೈನ್ಗೆ ಸ್ಪರ್ಶಿಸಿ ತಕ್ಷಣವೇ ವಿದ್ಯುತ್ ಶಾಕ್ ಆಗಿದ್ದಾರೆ.
ಅವರನ್ನು ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ದುರದೃಷ್ಟವಶಾತ್ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.. ಬಳಿಕ ಮೃತ ದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಕೃಷ್ಣಪ್ಪ ಕುಲಾಲ್ ಅವರು ಅರಸಿನಮಕ್ಕಿ ಕುಲಾಲ್ ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಪ್ರಸ್ತುತ ಕಾರ್ಯದರ್ಶಿಯಾಗಿಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ ಲಲಿತ, ಪುತ್ರ ಯತೀಶ್, ಪುತ್ರಿ ಶಿಲ್ಪಾ, ಕುಟುಂಬಸ್ಥರು ಮತ್ತು ಬಂದು ಮಿತ್ರರನ್ನು ಅಗಲಿದ್ದಾರೆ.









