ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ “ದರ್ಪಣ ಮಕ್ಕಳ ಕಲಾದರ್ಶನ” ಉದ್ಘಾಟನೆ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿಯ ಶ್ರೀರಾಮ ವಿದ್ಯಾಲಯ ಸೂರ್ಯನಗರದದಲ್ಲಿ “ದರ್ಪಣ – ಮಕ್ಕಳ ಕಲಾದರ್ಶನ” ಎಂಬ ಶೀರ್ಷಿಕೆಯಡಿ ಸಾಂಸ್ಕೃತಿಕ ಕಾರ್ಯಕ್ರಮವು ಅದ್ಧೂರಿಯಾಗಿ ಉದ್ಘಾಟನೆಗೊಂಡಿತು. ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಪ್ರತಿಭೆಯನ್ನು ಅನಾವರಣಗೊಳಿಸಲು ಈ ವೇದಿಕೆ ಸಜ್ಜುಗೊಂಡಿತು.

ಮಂಗಳೂರು ಕಲಾಸೂರ್ಯ ನಾಟ್ಯಾಲಯ ಸಂಸ್ಥಾಪಕಿ ಮತ್ತು ನೃತ್ಯಗುರು ಸೌಜನ್ಯ ವಿ. ಪಡುವೆಟ್ನಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, “ಪ್ರತಿಯೊಬ್ಬರಲ್ಲೂ ಸುಪ್ತವಾದ ಕಲಾತ್ಮಕ ಶಕ್ತಿಗಳು ಅಡಗಿರುತ್ತವೆ. ವಿದ್ಯಾರ್ಥಿಗಳಲ್ಲಿ ಈ ಪ್ರತಿಭೆಗಳನ್ನು ಗುರುತಿಸಿ ಬೆಳೆಯಲು ಶಾಲಾ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗುತ್ತವೆ. ವಿದ್ಯಾರ್ಥಿಗಳು ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಹೊರತರಬೇಕು” ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಸುಬ್ರಾಯ ಪುಣಚ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ಶಾಲಾ ನಾಯಕಿ ಮೇಘನಾ ಶುಭ ಹಾರೈಸಿದರು. ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ಉಪಸ್ಥಿತರಿದ್ದರು.

ಸಾನ್ವಿ  ಸ್ವಾಗತಿಸಿದರು. ತೇಜಸ್ವಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ನಾಯಕ ಹರ್ಷವರ್ಧನ್ ವಂದಿಸಿದರು

ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದ್ದು, ಗೀತೆ, ನೃತ್ಯ, ನಾಟಕ ಮತ್ತು ಭಾಷಣದ ಮೂಲಕ ಅವರು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.

  •  

Leave a Reply

error: Content is protected !!