


ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್ ಡಿ ಎಂ ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥ ಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗದ ಮುಖ್ಯಸ್ಥರಾದ ಡಾ.ಗಣರಾಜ್ ಕೆ ರವರು ಉದ್ಘಾಟಿಸಿ ಮಾತನಾಡಿದ ಅವರು “ಸೇವೆಯೇ ಧ್ಯೇಯವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು ದೇಶದ ಅಭಿವೃದ್ಧಿಗೆ ಬಹಳ ಕೊಡುಗೆ ನೀದಿದೆ. ಅಲ್ಲದೆ ಸ್ವಯಂ ಸೇವಕರಿಗೆ ಸಮಾಜದ ಜೊತೆ ಒಡನಾಟವನ್ನು ಬೆಳೆಸಿ ಅವರ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ. ಆದುದರಿಂದ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ಮೂಡಿಸಿಕೊಳ್ಳಬೇಕು” ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ರವರು “ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಮುನ್ನಡೆದುಕೊಂಡು ಬಂದಿದೆ. ಇಲ್ಲಿನ ಸ್ವಯಂ ಸೇವಕರು ರಾಜ್ಯ, ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಮುಂದೆಯೂ ಇಂತಹ ಸಾಧನೆಗಳು ಮರುಕಳಿಸಲಿ “ಎಂದು ಹೇಳಿದರು.
ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಡಾ.ರಾಜೇಶ್ ಬಿ., ನಿಕಟ ಪೂರ್ವ ಯೋಜನಾಧಿಕಾರಿಗಳಾದ ಡಾ.ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ.ಪಿ, ಸಲಹಾ ಸಮಿತಿ ಸದಸ್ಯರಾದ ದಿವ್ಯ ಕುಮಾರಿ ಹಾಗೂ ನಾಗರಾಜ್ ಭಂಡಾರಿ ರವರು ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಮೇಘ ಸ್ವಾಗತಿಸಿದರು, ಧನ್ಯ ಕಾರ್ಯಕ್ರಮ ನಿರೂಪಿಸಿದರು, ಗ್ರಂಥ ವಂದಿಸಿದರು









