


ನೆಲ್ಯಾಡಿ: ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿಯವರು, ಸೂರ್ಯನಗರದಲ್ಲಿರುವ ಶ್ರೀರಾಮ ವಿದ್ಯಾಸಂಸ್ಥೆಗೆ ವಿದ್ಯಾರ್ಥಿಗಳ ಸೌಕರ್ಯಕ್ಕಾಗಿ ಸುಮಾರು ರೂ.38ಸಾವಿರ ಮೌಲ್ಯದ ಗ್ರೈಂಡರ್ ಅನ್ನು ಕೊಡುಗೆಯಾಗಿ ನೀಡಿದರು.
ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿಯ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವಕ್ಲು ಅವರು ನೂತನ ಗ್ರೈಂಡರ್ ಅನ್ನು ಶಾಲೆಯ ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಉಪಾಧ್ಯಕ್ಷೆ ಸುಮನ, ಕಾರ್ಯದರ್ಶಿ ಸೌಮ್ಯ ಜಯರಾಜ್, ಕೋಶಾಧಿಕಾರಿ ಸುಮಲತಾ, ನೆಲ್ಯಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಆಂಗ್ಲ ಮಾಧ್ಯಮದ ಮುಖ್ಯಶಿಕ್ಷಕಿ ಕಾವ್ಯ, ಆಡಳಿತ ಮಂಡಳಿಯ ಕೋಶಾಧಿಕಾರಿ ಜಿನ್ನಪ್ಪ ಗೌಡ ಪೂವಾಜೆ, ಆಡಳಿತ ಮಂಡಳಿಯ ಸದಸ್ಯರು, ಪೂಜಾ ಸಮಿತಿಯ ಸದಸ್ಯರು, ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿಯರು ಉಪಸ್ಥಿತರಿದ್ದರು.








