ಅಬ್ದುಲ್ ರಹಿಮಾನ್ ಕೊಲೆ ಕೇಸ್ ಆರೋಪಿ ಭರತ್ ಕುಮ್ಡೇಲು ಶರಣಾಗತಿ

ಶೇರ್ ಮಾಡಿ

ಮಂಗಳೂರು: ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್​ ಕುಮ್ಡೇಲು ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಸರೆಂಡರ್ ಆಗಿದ್ದಾರೆ. 3-4 ತಿಂಗಳು ವಿಚಾರಣೆಗೆ ಹಾಜರಾಗದೆ ಭರತ್​ ಕುಮ್ಡೇಲು ತಪ್ಪಿಸಿಕೊಂಡಿದ್ದರು.

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆ ಕೇಸ್​ನಲ್ಲಿ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದರು.

ಕಳೆದ 3-4 ತಿಂಗಳು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್​ಗೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿತ್ತು. ಜೊತೆಗೆ ಕೆಲ ದಿನಗಳ ಹಿಂದಷ್ಟೇ ಭರತ್ ಕುಮ್ಡೇಲು ಸೇರಿದಂತೆ ಕೆಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್​ ದಾಖಲಿಸಲಾಗಿತ್ತು. ವಾರಂಟ್ ಮತ್ತು ಕೋಕಾ ಕೇಸ್​​ ಹಿನ್ನೆಲೆ ಸದ್ಯ ಭರತ್ ಜಿಲ್ಲಾ ಕೋರ್ಟ್​​ಗೆ ಶರಣಾಗಿದ್ದಾರೆ.

  •  

Leave a Reply

error: Content is protected !!