

ನೆಲ್ಯಾಡಿ: ಇಚ್ಲಂಪಾಡಿ- ನೇರ್ಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರಿನ ಗಾರ್ಡನ್ ಕನ್ಸ್ಟ್ರಕ್ಷನ್ ಮಾಲಕರಾದ ಕೇಶವ ಕೆ. ಅವರು ವಾಟರ್ ಪ್ಯೂರಿಫೈಯರ್ ಅನ್ನು ಕೊಡುಗೆಯಾಗಿ ನೀಡಿದರು.
ಹೊಸ ಪ್ಯೂರಿಫೈಯರ್ ಘಟಕವನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಸಂತ ಬಿಜೇರು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ಡಾ.ಗಿರೀಶ್, ಶಿಕ್ಷಕ ವೃಂದ, ಎಸ್ಡಿಎಂಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.






