ಕೆ ಎಸ್.ಆರ್.ಟಿ ಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ,ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಶೇರ್ ಮಾಡಿ

ನೇಸರ ಮಾ.19:ಕೆ.ಎಸ್.ಆರ್.ಟಿ ಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಕ್ಕಡ ಸಮೀಪದ ಬೂಡುಜಾಲು ಎಂಬಲ್ಲಿ  ಶನಿವಾರ (ಮಾ.19) ಸಂಜೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಬೆಂಗಳೂರಿನವರಾಗಿದ್ದು, ಅವರ ಪೈಕಿ ಓರ್ವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.ಧರ್ಮಸ್ಥಳದಲ್ಲಿ ದರ್ಶನ ಪಡೆದು ಬೆಂಗಳೂರಿಗೆ ಹಿಂತಿರುವಾಗ ಸುಬ್ರಮಣ್ಯ ಕಡೆಯಿದ ಬಂದ ಕೆ ಎಸ್.ಆರ್.ಟಿ ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ  ಎಂದು ಮೂಲಗಳಿಂದ ತಿಳಿದುಬಂದಿದೆ .

Leave a Reply

error: Content is protected !!