










ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷರಾಗಿ ಶೀನಪ್ಪ ನಾಯ್ಕ ಬರೆಗುಡ್ಡೆ, ಕಾರ್ಯದರ್ಶಿಯಾಗಿ ನಾರಾಯಣ ನಾಯ್ಕ ಚಾಮೆತ್ತಮೂಲೆ ಹಾಗೂ ಕೋಶಾಧಿಕಾರಿಯಾಗಿ ವಿಶ್ವನಾಥ ನಾಯ್ಕ ನಿಸರ್ಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಸಂಘದ ಕಾರ್ಯಕಾರಿ ಸಮಿತಿಯ ಇತರ ಪದಾಧಿಕಾರಿಗಳು ಹಾಗೂ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷ ಶೀನಪ್ಪ ನಾಯ್ಕ ಬರೆಗುಡ್ಡೆ ಸ್ವಾಗತಿಸಿದರು, ಕೋಶಾಧಿಕಾರಿ ವಿಶ್ವನಾಥ ನಾಯ್ಕ ನಿಸರ್ಗ ವಂದಿಸಿದರು.



