ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ

ಶೇರ್ ಮಾಡಿ

ನೇಸರ ನ8: ನವದೆಹಲಿಯಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿ,ನೂರಾರು ಮಕ್ಕಳ ವಿದ್ಯಾರ್ಜನೆಗೆ ನೆರವಾದ ಕಿತ್ತಳೆ ವ್ಯಾಪಾರಿಯಾಗಿದ್ದ ಇವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು.ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

error: Content is protected !!