ಕೆ ಎಸ್ ಎಸ್ ಕಾಲೇಜು: 8ನೇ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮ

ಶೇರ್ ಮಾಡಿ

ನೇಸರ ಜೂ.21: ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಹಾಗೂ ದೇಹದ ಏಕತೆಯನ್ನು ಸಾರುತ್ತದೆ. ಯೋಗ ಸಾಧನೆಯ ಪ್ರಾಮುಖ್ಯತೆಯನ್ನು ತಿಳಿಯಪಡಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಲು ಕೆಎಸ್ಎಸ್ ಕಾಲೇಜು ಸುಬ್ರಮಣ್ಯ, ಐಕ್ಯೂಎಸಿ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಛೇರಿ ತುಮಕೂರು (ರಿ). ನೇತ್ರಾವತಿ ವಲಯ ಮಂಗಳೂರು ದ.ಕ., ಸುಬ್ರಮಣ್ಯ ಶಾಖೆಯ ಸಹಯೋಗದೊಂದಿಗೆ ಜೂ.21 ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗವು ನಮ್ಮ ಜೀವನಶೈಲಿಯನ್ನು ಉತ್ತಮ ಗೊಳಿಸುವ ಮೂಲಕ ಜಗತ್ತು ಮತ್ತು ಪ್ರಕೃತಿಯೊಂದಿಗೆ ಏಕತೆಯ ಭಾವವನ್ನು ತಿಳಿಯಲು ಸಹಾಯಕ ಎಂದು ಕಾರ್ಯಕ್ರಮವನ್ನು ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿದ ನಿವೃತ್ತ ಮುಖ್ಯೋಪಾಧ್ಯಾಯರು, ನಿವೃತ್ತ ಯೋಧ ಹಾಗೂ ಯೋಗ ಬಂಧು ಆಗಿರುವಂತಹ ಸುಬ್ರಮಣ್ಯ ಎ. ಯು. ಅವರು ತಿಳಿಸಿಯಪಡಿಸಿದರು.

ಪತಂಜಲಿ ಯೋಗ ಶಿಕ್ಷಣದ ಯೋಗ ಬಂಧುಗಳಾದ ಬಾಲಕೃಷ್ಣ ಆರ್, ಸುಬ್ರಹ್ಮಣ್ಯ ಭಟ್ ಪಿಎಸ್, ಶ್ರೀಮತಿ ಜಯಲಕ್ಷ್ಮಿ ಪಿಎಸ್, ಶ್ರೀಮತಿ ರಾಜೇಶ್ವರಿ ಪಿಎಸ್ ಹಾಗೂ ನಾಗರಾಜ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು. ಯೋಗವು ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ ಡಾ.ಪ್ರಸಾದ್.ಏನ್ ಅವರು ತಿಳಿಸಿದರು.

ಮಹಾವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕಿ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿ ಬೆಳ್ಳಾರೆಯ ಸದಸ್ಯರಾದ ಶ್ರೀಮತಿ ಶ್ರೀಲತಾ ಕಮಿಲ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಂಗ್ಲಭಾಷಾ ಉಪನ್ಯಾಸಕಿ ಉಪನ್ಯಾಸಕಿ ಶ್ರೀಮತಿ ವನಿತಾ ಕೆ ಎನ್ ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾದ ಶ್ರೀಮತಿ ಕೃತಿಕಾ ಪಿ ಎಸ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಮಹಾವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!